ಉಡುಪಿ ಜಿಲ್ಲೆಗೆ ಗರಿಷ್ಠ ಪ್ರಮಾಣದ ನೆರೆ ಪರಿಹಾರ ಘೋಷಿಸಿ: ಯೋಗೀಶ್ ಶೆಟ್ಟಿ ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ನೆರೆಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಸರ್ಕಾರ ಗರಿಷ್ಟ ಪ್ರಮಾಣದ ಪರಿಹಾರ ಬಿಡುಗಡೆ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಆಗ್ರಹಿಸಿದ್ದಾರೆ.

ಅವರು ಮಂಗಳವಾರ ನೆರೆಗೆ ತುತ್ತಾದ ಕಾಪು ಕ್ಷೇತ್ರದ ಮಜೂರು, ಕರಂದಾಡಿ, ಮಂಡೇಡಿ, ಪಾಂಗಾಳ, ಬೆಳ್ಳಂಪಳ್ಳಿ ಮತ್ತು ಉಡುಪಿ ಜಿಲ್ಲೆಯ ಹಲವಾರು ಕಡೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಈ ಹಿಂದೆ ಮೈತ್ರಿ ಸರ್ಕಾರ ಅಧಿಕಾರ ಅವಧಿಯಲ್ಲಿ ಕೊಡಗಿನ ಪ್ರವಾಹ ಉಂಟಾದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು, ನೆರೆಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ ಹತ್ತು ಲಕ್ಷ ಮೊತ್ತದ ಮನೆ ಕಟ್ಟಿಸಿಕೊಟ್ಟು ಶಾಶ್ವತ ಸೂರು ಕಲ್ಪಿಸಿದ್ದರು. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮನೆ ನೆಲಸಮಗೊಂಡ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡಬೇಕು. ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳೆ ಹಾನಿ, ಜಾನುವಾರುಗಲನ್ನು ಕಳೆದುಕೊಂಡವರಿಗೂ ಹೆಚ್ಚಿನ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.