ಕದಳಿ ಮಹಿಳಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಚನ ದಿನ ಆಯೋಜನೆ

ಕಾರ್ಕಳ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ಇದರ ಕಾರ್ಕಳ ತಾಲೂಕು ಘಟಕ ಹಾಗೂ ಕದಳಿ ಮಹಿಳಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆ.29 ರಂದು ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಜಯಂತಿ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕೈರಬೆಟ್ಟುವಿನಲ್ಲಿ ಮಕ್ಕಳಿಗೆ ವಚನಗಳಲ್ಲಿ ನಿಸರ್ಗದ ಪರಿಕಲ್ಪನೆ – ವಚನಸ್ಪರ್ಧೆ – ಗಾಯನ ಮತ್ತು ಅದರ ವಿಶ್ಲೇಷಣೆ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು. ಸುಮಾರು 20 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕದಳಿ ಮಹಿಳಾ ವೇದಿಕೆ ಹಾಗೂ ಕಾರ್ಕಳ ತಾಲೂಕು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಡಾ. ವೀಣಾದೇವಿ ಶಾಸ್ತ್ರೀಮಠ ದೀಪ ಬೆಳಗಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಗೌರವ ಅತಿಥಿಗಳಾಗಿ ನಿಟ್ಟೆ ಕ್ಯಾಂಪಸ್ ಮೈಂಟೆನೆನ್ಸ್ ಎಂಡ್ ಡೆವಲಪ್ಮೆಂಟ್ ನ ನಿರ್ದೇಶಕ ಯೋಗೀಶ್ ಹೆಗ್ಡೆ, ನಿಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಡಾ. ಸುದೀಪ್ ಹೆಗ್ಡೆ ಮತ್ತು ನಿಟ್ಟೆ ಕಾಲೇಜಿನ ಡಾ.ಶಂಕರ್ ಬಿ.ಬಿ ಇವರು ಉಪಸ್ಥಿತರಿದ್ದು ಮಕ್ಕಳೊಡನೆ ಹಿತಚಿಂತನೆ ನಡೆಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ ಶೆಟ್ಟಿಯವರು ಕಾರ್ಯಕ್ರಮವನ್ನು ಸಂಯೋಜಿಸಿದರು.