ಉಡುಪಿ: ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 75 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಯಕ್ಷ ಗುರು ಉದಯ ಕುಮಾರ್ ಮಧ್ಯಸ್ಥ ಇವರನ್ನು ಸನ್ಮಾನಿಸಲಾಯಿತು.
ಗೌರವಾಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಅದಿತಿ ಬಿಲ್ಡರ್ ಮಾಲಕ ರಂಜನ್ ಕೆ, ಅಧ್ಯಕ್ಷ ಕೇಶವಮೂರ್ತಿ ಬೆಲ್ಪತ್ರೆ, ಯಕ್ಷಗಾನ ವಿಮರ್ಶಕ ಫ್ರೊ ಉದಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನಿಟ್ಟೂರು ಮಹಾಬಲ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಜಿ ಬಾಬು ಗೌಡ, ಅಮೃತ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿ ಭಾಸ್ಕರ್ ಸುವರ್ಣ ಕನ್ನರ್ಪಾಡಿ, ಕಾರ್ಯದರ್ಶಿ ಗಣೇಶ್ ಕೋಟ್ಯಾನ್, ಕೋಶಾಧಿಕಾರಿ ನರಸಿಂಹ ಎನ್ ಆರ್, ಕಲಾಕಾರ್ಯದರ್ಶಿ ಶ್ರೀಧರ್ ಭಟ್ ಉಪಸ್ಥಿತರಿದ್ದರು.
















