ಉಡುಪಿ: ಜಿಲ್ಲಾ ಗೃಹರಕ್ಷಕ ದಳ ಕಾರ್ಕಳ ಘಟಕದ ಗೃಹರಕ್ಷಕ ಶಶಿಕಿರಣ ಅವರು ದಾವಣಗೆರೆ ಜಿಲ್ಲೆಯ ದೇವರ ಬೆಳೆಕೆರೆಯ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 15 ರಿಂದ 28 ರ ವರೆಗೆ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಪ್ರಕಟಣೆ ತಿಳಿಸಿದೆ.












