ಹಾವೇರಿ: ಇಲ್ಲಿಯ ಶಿವಬಸವನಗರದ ಮನೆಯೊಂದರ ಎದುರು ತುಂಬಿಟ್ಟಿದ್ದ ಬಕೆಟ್ ನೀರಿನಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ 14 ತಿಂಗಳ ದಕ್ಷಿತ್ ಎಂಬ ಮಗು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿದೆ.ಈ ಅವಘಡದ ಬಗ್ಗೆ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯ ಮುಂಭಾಗದಲ್ಲಿ ಅ.19ರಂದು ಮಗು ಆಟವಾಡುತ್ತಿತ್ತು. ಮನೆಯ ಎದುರು ನೀರು ತುಂಬಿದ್ದ ಬಕೆಟ್ನಲ್ಲಿ ತಲೆ ಕೆಳಗಾಗಿ ಮಗು ಬಿದ್ದಿತ್ತು. ಅಲ್ಲಿಯೇ ಪ್ರಜ್ಞೆ ತಪ್ಪಿತ್ತು. ಬಕೆಟ್ನಲ್ಲಿ ಮಗುವಿನ ಕಾಲು ನೋಡಿದ್ದ ಪೋಷಕರು ಹಾಗೂ ಸ್ಥಳೀಯರು, ಮಗುವನ್ನು ಮೇಲಕ್ಕೆ ಎತ್ತಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಯೇ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದರು.
















