ಉಡುಪಿ:21ನೇ ಶತಮಾನದಲ್ಲಿ ಔದ್ಯೋಗಿಕ ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಾಚೀನ ಭಾರತೀಯ ಜ್ಞಾನ ಪರಂಪರೆಯ ಪ್ರಸ್ತುತತೆ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಟ್ (PIM) ಉಡುಪಿ, ನೇಪಾಳದ ಮಾಧೇಶ್ ವಿಶ್ವವಿದ್ಯಾಲಯ ಮತ್ತು ಉಡುಪಿ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ “21ನೇ ಶತಮಾನದಲ್ಲಿ ಔದ್ಯೋಗಿಕ ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಾಚೀನ ಭಾರತೀಯ ಜ್ಞಾನ ಪರಂಪರೆಯ ಪ್ರಸ್ತುತತೆ” ಎಂಬ ವಿಷಯದ ಮೇಲೆ ಅಂತರರಾಷ್ಟ್ರೀಯ ಸಮ್ಮೇಳನವನ್ನು ನವೆಂಬರ್ 7 ಮತ್ತು 8, 2025 ರಂದು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ. ಈ ಸಮ್ಮೇಳನವನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶೀರ್ವಾದದಿಂದ ಆಯೋಜಿಸಲಾಗಿದೆ.

ಈ ಸಮ್ಮೇಳನವು ಭಾರತದ ಪ್ರಾಚೀನ ಸಾಹಿತ್ಯ ಪರಂಪರೆಯಾದ ವೇದಗಳು, ಉಪನಿಷತ್ತುಗಳು ಮತ್ತು ಮಹಾಭಾರತ, ರಾಮಾಯಣ ಮುಂತಾದ ಗ್ರಂಥಗಳಲ್ಲಿ ಅಡಕವಾಗಿರುವ ಜ್ಞಾನವನ್ನು ಆಧುನಿಕ ನಿರ್ವಹಣೆ, ನಾಯಕತ್ವ, ತಂತ್ರಜ್ಞಾನ, ಸುಸ್ಥಿರ ಅಭಿವೃದ್ಧಿ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಹೇಗೆ ಅನ್ವಯಿಸಬಹುದು ಎಂಬ ಬಗ್ಗೆ ಚಿಂತನೆ ನಡೆಸುವ ಉದ್ದೇಶವನ್ನು ಹೊಂದಿದೆ.

ಒಂಬತ್ತು ಮಂದಿ ವಿಷಯ ಪರಿಣಿತರ ವಿಶೇಷ ಉಪನ್ಯಾಸಗಳು, ಇಪ್ಪತ್ತಕ್ಕೂ ಹೆಚ್ಚು ಆಹ್ವಾನಿತ ತಜ್ಞರ ಉಪನ್ಯಾಸಗಳು, ಹಾಗೂ ಐವತ್ತಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಈ ಸಮ್ಮೇಳನದಲ್ಲಿ ಮಂಡನೆ ಆಗಲಿವೆ. ನಮ್ಮ ದೇಶದ ಮತ್ತು ಯು. ಎಸ್. ಎ. ಜಪಾನ್, ನೇಪಾಳ ಮುಂತಾದ ಹಲವಾರು ವಿದೇಶಗಳಿಂದಲೂ ಪ್ರಮುಖ ಸಂಶೋಧಕರು, ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಉದ್ಘಾಟನಾ ಸಮಾರಂಭ ನವೆಂಬರ್ 7, 2025 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯಲಿದ್ದು, ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾರ್ಪಬಂಧಕರಾದ ಶ್ರೀ ರಮೇಶ್ ವೈದ್ಯ ಮುಖ್ಯ ಅತಿಥಿಯಾಗಿದ್ದಾರೆ. ಡಾ. ಚಂದ್ರಶೇಖರ್ ಜಿ.ಎಸ್., ಗೌರವ ಕಾರ್ಯದರ್ಶಿ, PIM ಮತ್ತು ಶ್ರೀ ಸಿಎ ಟಿ. ಪ್ರಶಾಂತ್ ಹೊಳ್ಳ, ಗೌರವ ಖಜಾಂಚಿ, PIM, ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಮಾರಂಭವನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಡಾ. ಎ. ಪಿ. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರೋಪ ಸಮಾರಂಭವು ನವೆಂಬರ್ 8, 2025 ರಂದು ಮಧ್ಯಾಹ್ನ 1:30ಕ್ಕೆ ನಡೆಯಲಿದ್ದು, ಶ್ರೀ ಪ್ರಕಾಶ ಅಡಿಗ, ಪ್ರಾದೇಶಿಕ ವ್ಯವಸ್ಥಾಪಕರು, ಎಸ್‌ಬಿಐ ಉಡುಪಿ, ಶ್ರೀ ಶ್ರೀಕಾಂತ್ ಆಚಾರ್ಯ, ಯೋಜನಾ ಮಹಾಪ್ರಬಂಧಕ, ಬ್ರಿಟಾನಿಯಾ ಇಂಡಸ್ಟ್ರೀಸ್ ಲಿಮಿಟೆಡ್, ಬೆಂಗಳೂರು, ಹಾಗೂ ಶ್ರೀ ಸಿಎ ಟಿ. ಪ್ರಶಾಂತ್ ಹೊಳ್ಳ, ಗೌರವ ಖಜಾಂಚಿ, PIM, ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಮಾರಂಭಕ್ಕೆ ಪೂರ್ಣಪುಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ನಿರ್ದೇಶಕರಾದ ಡಾ. ಪಿ.ಎಸ್.ಐತಾಳ್ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಾಚೀನ ಜ್ಞಾನ ಪರಂಪರೆಯ ಪ್ರಸ್ತುತತೆ, ಹಾಗೂ ಇಂದಿನ ಆಧುನಿಕ ಯುಗದಲ್ಲಿ ಅವುಗಳನ್ನು ಹೇಗೆ ಸಮರ್ಪಕವಾಗಿ ಬಳಸಿಕೊಳ್ಳಬಹುದು ಎಂಬ ಬಗ್ಗೆ ವಿಸ್ತ್ರತವಾದ ವಿಚಾರ ವಿನಿಮಯ ನಡೆಯಲಿರುವ ಈ ಸಮ್ಮೇಳನದಲ್ಲಿ ಆಸಕ್ತರು ಭಾಗವಹಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.