ಅ.19 ರಂದು ಕಾರ್ಕಳದಲ್ಲಿ ಕಲಾಶ್ರೀ ಶಿಬಿರ: ಮಕ್ಕಳಿಗೆ ಕಾದಿವೆ ಭರ್ಜರಿ ಸ್ಪರ್ಧೆ, ಬಹುಮಾನಗಳು

ಉಡುಪಿ : ಕಾರ್ಕಳ ತಾಲೂಕು ಶಿಶು ಅಭಿವೃಧ್ಧಿ ಯೋಜನೆ, ಸೌಹಾರ್ಧ ಸ್ತ್ರೀಶಕ್ತಿ ಭವನ, ಕಾರ್ಕಳ ಇಲ್ಲಿ ಅಕ್ಟೋಬರ್ 19 ರಂದು ಬೆಳಗ್ಗೆ 9 ಕ್ಕೆ ಕಲಾಶ್ರೀ ಶಿಬಿರವನ್ನು ಆಯೋಜಿಸಲಾಗಿದೆ.

ಕಲಾಶ್ರೀ ಪ್ರಶಸ್ತಿ: ೯ ರಿಂದ ೧೬ ವರ್ಷದೊಳಗಿನ ಮಕ್ಕಳು ಈ ಕೆಳಗಿನ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.
ಸೃಜನಾತ್ಮಕ ಕಲೆ : ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು),

ಸೃಜನಾತ್ಮಕ ಬರವಣಿಗೆ : ಕಥೆ, ಕವನ, ಪ್ರಬಂಧ ಬರೆಯುವುದು (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು),

ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ, ಯೋಗ ನೃತ್ಯ, ಮ್ಯಾಜಿಕ್ ಇತ್ಯಾದಿ ಯಾವುದಾದರೊಂದು ಕಲೆಯನ್ನು ಮಾತ್ರ ಪ್ರದರ್ಶಿಸಲು ಅವಕಾಶ ಇರುತ್ತದೆ.

ವಿಜ್ಞಾನದಲ್ಲಿ ನೂತನ ಅವಿಷ್ಕಾರ: ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ ಮತ್ತು ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತೀರ್ಪುಗಾರರ ಇನ್ನಿತರ ಪ್ರಶ್ನೆಗಳಿಗೆ ಉತ್ತರ (ವಿಜ್ಞಾನ ಕ್ಷೇತ್ರದಲ್ಲಿ ಭಾಗವಹಿಸುವ ಮಕ್ಕಳು ಪ್ರತ್ಯೇಕ ಮಾದರಿ ಪ್ರದರ್ಶನ ಮಾಡುವುದು ಕಡ್ಡಾಯ).

ಗಾಂಧಿ ಜಯಂತಿ ಆಚರಣೆ: 5 ರಿಂದ 16 ವರ್ಷದೊಳಗಿನ ಮಕ್ಕಳು ಚಿತ್ರಕಲೆಯಲ್ಲಿ ೩ ಗುಂಪಿನಂತೆ ಒಟ್ಟು 9 ಮಕ್ಕಳು (5 ರಿಂದ 8, 9 ರಿಂದ 12, 13 ರಿಂದ 16) ಭಾಗವಹಿಸಬಹುದು.

ಸ್ವಾತಂತ್ರ್ಯ ದಿನಾಚರಣೆ: 5 ರಿಂದ 16 ವರ್ಷದೊಳಗಿನ ಮಕ್ಕಳು ದೇಶಭಕ್ತಿಗೀತೆಯಲ್ಲಿ 3 ಗುಂಪಿನಂತೆ ಒಟ್ಟು 9 ಮಕ್ಕಳು (5 ರಿಂದ 8, 9 ರಿಂದ 12, 13 ರಿಂದ 16) ಭಾಗವಹಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಛೇರಿ, ಕಾರ್ಕಳ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.