ಉಡುಪಿ ವಕೀಲರ ಸಂಘ: ನೂತನ ಅಧ್ಯಕ್ಷರಾಗಿ ಬಿ. ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧ ಆಯ್ಕೆ

ಉಡುಪಿ: ಉಡುಪಿ ವಕೀಲರ ಸಂಘದ 2021-22 ಹಾಗೂ 2022-23 ನೇ ಸಾಲಿನ ಅಧ್ಯಕ್ಷರಾಗಿ ಬಿ. ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶಶೀಂದ್ರ ಕುಮಾರ್ ಶುಕ್ರವಾರ ಘೋಷಿಸಿದ್ದಾರೆ.

ಬಿ. ನಾಗರಾಜ್ ಈ ಹಿಂದಿನ ಸಾಲಿನಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ರೆನೋಲ್ಡ್ ಪ್ರವೀಣ್ ಕುಮಾರ್ ಕಳೆದ 4 ಅವಧಿಗಳಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಉಳಿದಂತೆ ಅವಿರೋಧವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಈ ಕೆಳಗಿನಂತಿದೆ:
ಉಪಾಧ್ಯಕ್ಷ- ದಿನೇಶ್ ಬಿ.‌ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಾಘವೇಂದ್ರ ಹೆಗ್ಡೆ, ಶಿವಾನಂದ ಅಮೀನ್, ಎಚ್. ಗುರುರಾಜ್ ಶೆಟ್ಟಿ, ಅಶ್ವಿತ ಅಮೀನ್, ಪೂರ್ಣಿಮಾ, ಸ್ವರ್ಣಲತಾ ಹಾಗೂ ಅಮೃತಕಲಾ ಅವರು ಅವಿರೋಧವಾಗಿ ನೇಮಕಗೊಂಡಿದ್ದಾರೆ.

ಕ್ರೀಡಾ ಕಾರ್ಯದರ್ಶಿ, ಸಾಂಸ್ಕೃತಿಕ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಕಾರ್ಯಕಾರಿ ಸಮಿತಿಯ 13 ಸದಸ್ಯ ಸ್ಥಾನಗಳಿಗೆ ಸೆಪ್ಟೆಂಬರ್ 24 ಚುನಾವಣೆ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.