ಉಡುಪಿ: ಇಂದು ‘ಮಲಬಾರ್ ವಿಶ್ವರಂಗ ಪುರಸ್ಕಾರ’ ಪ್ರದಾನ ಸಮಾರಂಭ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆ ಇವರ ಜಂಟಿ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಾಗೂ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ ಸಮಾರಂಭವು ಉಡುಪಿಯ ಮಲಬಾರ್ ಗೋಲ್ಡ್ ಶಾಖೆಯಲ್ಲಿ ಇಂದು (ಮಾ. 26) ಸಂಜೆ 5 ಗಂಟೆಗೆ ನಡೆಯಲಿದೆ.

ಈ ಸಂದರ್ಭದಲ್ಲಿ ಹಿರಿಯ ಕನ್ನಡದ ರಂಗಕರ್ಮಿಗಳಾದ ಎನ್ ರಾಜಗೋಪಾಲ್ ಬಲ್ಲಾಳ್ ಉಡುಪಿ, ಲಕ್ಷ್ಮಣ್ ಕುಮಾರ್ ಮಲ್ಲೂರು ಮಂಗಳೂರು, ಅಹಲ್ಯ ಬಲ್ಲಾಳ್ ಮುಂಬೈ, ಶಶಿಕಲಾ ಜೋಶಿ ಧಾರವಾಡ ಹಾಗೂ ಗಂಗಾಧರ ಕಿದಿಯೂರು ಉಡುಪಿ ಅವರಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಗಿರ್ಮಿಟ್ ಚಲನಚಿತ್ರದ ನಾಯಕ ನಟ ಆಶ್ಲೇಷ ರಾಜ್ ಅವರ ಏಕವ್ಯಕ್ತಿ ರಂಗಪ್ರಯೋಗ ‘ರಾಷ್ಟ್ರವೀರ ಎಚ್ಚಮನಾಯಕ’ ಪ್ರದರ್ಶನಗೊಳ್ಳಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.