ಉಡುಪಿ:ನಗರಸಭೆ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಯನ್ನು ಸಂಪರ್ಕಿಸಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಪಕವಾಗಿ
ನಿರ್ವಹಿಸಲು ನಗರಸಭಾ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಯಾವುದೇ ತುರ್ತು ಸಂದರ್ಭಗಳಲ್ಲಿ ನಗರಸಭಾ ಕಚೇರಿಯ ಸಹಾಯವಾಣಿ ಕಂಟ್ರೋಲ್ ರೂಂ ಸಂಖ್ಯೆ: 0820-2520306 ಅಥವಾ ನೋಡೆಲ್
ಅಧಿಕಾರಿಗಳಾದ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್ ಮೊ.ನಂ: 9741943666, ಪರಿಸರ ಅಭಿಯಂತರೆ ಸ್ನೇಹಾ ಕೆ.ಎಸ್. ಮೊ.ನಂ: 9164397765, ಕಚೇರಿ ವ್ಯವಸ್ಥಾಪಕ ನಾರಾಯಣ ಎಸ್.ಎಸ್ ಮೊ.ನಂ: 9448723833, ಕಂದಾಯ ಅಧಿಕಾರಿ ಸಂತೋಷ್ ಎಸ್.ಡಿ ಮೊ.ನಂ: 9449747209 ಹಾಗೂ ಕಂಟ್ರೋಲ್ ರೂಂ ನೋಡೆಲ್ ಅಧಿಕಾರಿ ಕೆ.ದಿವಾಕರ್ ಮೊ.ನಂ: 7483026687
ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.