ಉಡುಪಿ: 2014ರ ನಂತರ ದೇಶದಲ್ಲಿ ಉಗ್ರರನ್ನು ಗಮನಿಸುವ ಕಾರ್ಯ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕಾಶ್ಮೀರದ ಜನರಿಗೆ ಸಂಪೂರ್ಣ ಸ್ವಾತಂತ್ರವನ್ನು ನೀಡಲಾಗಿತ್ತು .ಈ ಮಧ್ಯೆ ಮೊನ್ನೆ ಭಯೋತ್ಪಾದಕ ಕೃತ್ಯ ನಡೆದಿದ್ದು ಸರಕಾರ ಅದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುವ ಕೆಲಸ ಮಾಡಿದೆ ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು 2014ರ ಮೊದಲು ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಭಯೋತ್ಪಾದನೆ ಯಾವ ರೀತಿ ಇತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಬೆಂಗಳೂರು ಮಂಗಳೂರು ಕೊಯಮತ್ತೂರು ಮುಂತಾದ ಕಡೆಗಳಲ್ಲಿ ಕೂಡ ಬಾಂಬ್ ಬ್ಲಾಸ್ಟ್ ಗಳಾಗಿದ್ದವು. ಆದರೆ ನಂತರದ ವರ್ಷಗಳಲ್ಲಿ ಭಯೋತ್ಪಾದಕ ಚಟುವಟಿಕೆ ನಿಯಂತ್ರಣಕ್ಕೆ ಬಂದಿತ್ತು.ಅಲ್ಲಿ ಅಗತ್ಯ ರಕ್ಷಣಾ ಕ್ರಮಗಳನ್ನು ಸರಕಾರ ಮಾಡಿತ್ತು. ಈ ನಡುವೆ ಮೊನ್ನೆ ನಡೆದ ದಾಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆಗಳನ್ನು ನೀಡಿದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.












