ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಪುತ್ತಿಗೆ ಶ್ರೀಪಾದರು

ಉಡುಪಿ: ತೀವ್ರ ಅನಾರೋಗ್ಯದ ಹಿನ್ನೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳನ್ನು ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಭೇಟಿ ಮಾಡಿ, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.
ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿತ್ತು. ಚಿಕಿತ್ಸೆಯ ಬಳಿಕ ಸ್ಥಿರವಾಗಿದೆ ಎಂದು ಪುತ್ತಿಗೆ ಶ್ರೀ ತಿಳಿಸಿದ್ದಾರೆ.