ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿರುವ ಅವರು, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಗೀತಾ ಜಯಂತಿಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೆಡೆಯಲಿರುವ ”ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ” ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ


















