ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಈ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧ ಮಾಡಲಾಗಿದೆ. ನ.28ರಂದು ಬೆಳಿಗ್ಗೆ 9ಗಂಟೆಯಿಂದ 3ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ.
ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧ ವಿವರ ಹೀಗಿದೆ:
ಆದಿ ಉಡುಪಿ ಹೆಲಿಪ್ಯಾಡ್ನಿಂದ ಕರಾವಳಿ ಜಂಕ್ಷನ್-ಬನ್ನಂಜೆ-ಶಿರಿಬೀಡು-ಕಲ್ಪಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಲಾಗಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು.
ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓವರ್- ಅಂಬಲಪಾಡಿ -ಬ್ರಹ್ಮಗಿರಿ- ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.
ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ, ಸ್ವಾಗತಗೋಪುರ-ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.
ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ- ಎಂಜಿಎಂ-ಎಸ್ಕೆಎಂ- ಬೀಡಿನಗುಡ್ಡೆ ಮುಖೇನಾ ಉಡುಪಿಗೆ ಬರುವುದು.
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರುವುದು.
ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.


















