ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಬಿತ್ತಿಪತ್ರ ರಚನಾ ಸ್ಪರ್ಧೆ

ಉಡುಪಿ: ಶ್ರಿ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೌನ್ಸೆಲಿಂಗ್ ಘಟಕವು ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ದಿನಾಂಕ 27 ಮೇ 2025 ರಂದು ಬಿತ್ತಿಪತ್ರ ರಚನಾ ಸ್ಪರ್ಧೆಯನ್ನು ಆಯೊಜಿಸಿತ್ತು.
ಈ ಸ್ಪರ್ಧೆಯಲ್ಲಿ ಇಂಜಿನಿಯರಿಂಗ್ ವಿಭಾಗ, ಎಂಬಿಎ ವಿಭಾಗ ಮತ್ತು ನಿರಾಮಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳು ತಂಬಾಕು ಸೇವನೆಯ ಹಾನಿಕಾರಕ ಪರಿಣಾಮವನ್ನು ತಿಳಿಸುವ ಬಿತ್ತಿ ಪತ್ರವನ್ನು ರಚಿಸುವ ಮೂಲಕ ತಂಬಾಕು ರಹಿತ ಜೀವನ ಶೈಲಿಯ ಮಹತ್ವವನ್ನು ತಿಳಿಸಿದರು.

ಈ ಸ್ಫರ್ಧೆಯು ಯುವಜನತೆಗೆ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮ ಹಾಗೂ ಆರೋಗ್ಯಕರ ಆಯ್ಕೆ ಮಾಡುವತ್ತ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಸ್ಪರ್ಧೆಯಲ್ಲಿ ಒಟ್ಟು 23 ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು ಮತ್ತು ಅತ್ಯುತ್ತಮ ಪ್ರದರ್ಶನ ನೀಡಿದ ಎರಡು ತಂಡಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಯಾದ ಡಾ. ರಾಧಕೃಷ್ಣ ಐತಾಳ್, ಸಂಸ್ಥೆಯ ಪ್ರಾಂಶುಪಾಲರಾದ ಡಾ.ತಿರುಮಲೇಶ್ವರ ಭಟ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಸಚಿನ್ ಪ್ರಭು ಮತ್ತು ಕೌನ್ಸೆಲಿಂಗ್ ಘಟಕದ ಸಂಯೋಜಕರಾದ ವಿದ್ಯಾ ಭಟ್
ಉಪಸ್ಥಿತರಿದ್ದರು.