ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ 10 ಸಾವಿರ ಆರ್ಥಿಕ ನೆರವು ಹಸ್ತಾಂತರ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಚಿಕಿತ್ಸೆಗಾಗಿ 10 ಸಾವಿರ ರೂಪಾಯಿ ಮೊತ್ತದ ಆರ್ಥಿಕ ನೆರವನ್ನು ಉಡುಪಿಯ ರಾಮ ಭವನ ಹೋಟೆಲಿನ ಸಂಕೀರ್ಣದಲ್ಲಿ ಈಚೆಗೆ ಹಸ್ತಾಂತರಿಸಲಾಯಿತು. ಪ್ರತಿಷ್ಠಾನದ ಗೌರವಾಧ್ಯಕ್ಷ ಶೆಣೈ ಅವರು ಕಿರಣ ಯು.ಕೆ ಅವರಿಗೆ ಆರ್ಥಿಕ ನೆರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ಶಂಕರ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಪ್ರತಿಷ್ಠಾನದ ಸದಸ್ಯರಾದ ಸುಮಿತ್ರಾ ಕೆರೆಮಠ, ಪದ್ಮಾಸಿನಿ ಉದ್ಯಾವರ, ಗಜಾನನ ಹೆಗಡೆ, ಭಾವನಾ ಕೆರೆಮಠ ಹಾಗು ಸಂಚಾಲಕ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.