ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ರಾಘವೇಂದ್ರ ಕಿಣಿಗೆ ಸನ್ಮಾನ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ರಾಘವೇಂದ್ರ ಕಿಣಿ ಅವರನ್ನು ಗೌರವಿಸಲಾಯಿತು.
ಉಡುಪಿಯ ರಾಮಭವನ್ ಹೋಟೆಲ್ ಸಂಕಿರ್ಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಣಿ ಅವರನ್ನು ಪ್ರತಿಷ್ಠಾನದ ಗೌರವಾಧ್ಯಕ್ಷ ಯು. ವಿಶ್ವನಾಥ ಶೆಣೈ ಗೌರವಿಸಿದರು.
ಈ ಸಂದರ್ಭದಲ್ಲಿ ಪ್ರಭಾ ವಿ. ಶೆಣೈ, ಸಂಸ್ಥೆಯ ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷರಾದ ಮರವಂತೆ ನಾಗರಾಜ್ ಹೆಬ್ಬಾರ್, ಸಂಧ್ಯಾ ಶೆಣೈ, ವಿಘ್ನೇಶ್ವರ ಅಡಿಗ, ಸುಗುಣ ಸುವರ್ಣ, ಮಧುಸೂದನ್ ಹೇರೂರು, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ,ಅಮಿತಾಂಜಲಿ ಕಿರಣ್, ಜನಾರ್ದನ ಹಾವಂಜೆ, ಸೋಮನಾಥ ಚಿಟ್ಪಾಡಿ, ವಿವೇಕಾನಂದ ಎನ್, ಪೂರ್ಣಿಮಾ ಜನಾರ್ದನ್, ವಿದ್ಯಾ ಶ್ಯಾಮ್ ಸುಂದರ್, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ, ಮಹೇಶ್ ಮಲ್ಪೆ, ನಿತಿನ್ ಪೆರಂಪಳ್ಳಿ, ಸಂಚಾಲಕ ರವಿರಾಜ್ ಎಚ್.ಪಿ ಮೊದಲಾದವರು ಉಪಸ್ಥಿತರಿದ್ದರು.