ಕನ್ನರ್ಪಾಡಿ ಶ್ರೀಜಯದುರ್ಗ ಪರಮೇಶ್ವರಿ ದೇವಸ್ಥಾನದಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ

ಉಡುಪಿ: ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗುವಂತೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಉಡುಪಿ ಕನ್ನರ್ಪಾಡಿ ಶ್ರೀಜಯದುರ್ಗ ಪರಮೇಶ್ವರಿ ದೇವಸ್ಥಾನದಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ವಿಶೇಷ ಸಂಕಲ್ಪದೊಂದಿಗೆ ವಿಶೇಷ ಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.