ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅಗ್ನಿಶಾಮಕ ದಳದಿಂದ ವ್ಯಕ್ತಿಯ ರಕ್ಷಣೆ

ಉಡುಪಿ: ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವ ತಮ್ಮದೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ನಡೆದಿದೆ.

ಬೊಬ್ಬೆ ಕೇಳಿದ ಸ್ಥಳೀಯರು ಕೂಡಲೇ ಕುಂದಾಪುರದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸುಮಾರು 30 ಅಡಿ ಆಳದ ಬಾವಿಗೆ ಇಳಿದು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದ ಠಾಣಾಧಿಕಾರಿ ವಿ. ಸುಂದರ ನೇತೃತ್ವದಲ್ಲಿ ಕಾಜಾಹುಸೇನ್, ಸಚಿನ್, ರಿಯಾಜ್ ಹಾಗೂ ಸುಂದರ್ ಪಾಲ್ಗೊಂಡಿದ್ದರು.