ಬೇಸಿಗೆ ಶಿಬಿರವು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಪೂರಕ- ಗ್ರೇಸಿ ಗೊನ್ಸಾಲ್ವಿಸ್

ಉಡುಪಿ : ಬೇಸಿಗೆ ಶಿಬಿರವು ಮಕ್ಕಳ ಪ್ರತಿಭೆಗಳ ಅನಾವರಣಗೊಳಿಸಲು ಪೂರಕವಾಗಿದ್ದು, ಮಕ್ಕಳಿಗೆ ಚಿತ್ರಕಲೆ, ಕರಕುಶಲ ಸಿದ್ಧತೆ ತರಬೇತಿ, ಕರಾಟೆ ಹಾಗೂ ಪ್ರವಾಸ ಸ್ಥಳಗಳ ವೀಕ್ಷಣೆಗೆ ಅವಕಾಶವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಕರೆ ನೀಡಿದರು.

    ಅವರು ಗುರುವಾರ ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಉಡುಪಿ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಬಾಲಭವನ ಬ್ರಹ್ಮಗಿರಿಯಲ್ಲಿ ಜರುಗಿದ ರಜಾ-ಮಜಾ ಬೇಸಿಗೆ ಶಿಬಿರದಲ್ಲಿ ಮಾತನಾಡಿದರು. ಕಾರ್ಯಕ್ರಮಕ್ಕೆ ಮಕ್ಕಳು ಮತ್ತು ಅಧಿಕಾರಿಗಳು ದೀಪ ಬೆಳಗಿಸಿ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ವೀಣಾ ವಿವೇಕಾನಂದ ರಾವ್, ಚಂದ್ರಿಕಾ ಎಸ್. ನಾಯಕ್, ಸಂಪನ್ಮೂಲ ವ್ಯಕ್ತಿಗಳಾದ ಹೇಮಲತಾ, ಮಂಜುನಾಥ, ನಿಮಿತ, ರಾಜ ಶೇಖರ್, ರಕ್ಷಾ ಹಾಗೂ ನೂರಾರು ಮಕ್ಕಳು ಉಪಸ್ಥಿತರಿದ್ದರು. ರಮ್ಯಾ ಪಿ. ನಿರೂಪಿಸಿದರು.