ಉಡುಪಿ: ವಿದ್ಯಾರ್ಥಿನಿ ನಿಖಿತಾ ಕುಲಾಲ್ ಅನುಮಾನಸ್ಪದ ಸಾವು ಪ್ರಕರಣ; ವೈದ್ಯರ ನಿರ್ಲಕ್ಷ್ಯ ಆರೋಪ

ಉಡುಪಿ: ಉಡುಪಿಯ ಖಾಸಗಿ‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಎರ್ಮಾಳು ನಿವಾಸಿ ವಿದ್ಯಾರ್ಥಿನಿ ನಿಖಿತಾ ಕುಲಾಲ್ (20) ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಸಂಘಟನೆ ನಾಳೆ (ಜೂ.23) ರಂದು ಪ್ರತಿಭಟನೆಗೆ ಕರೆಕೊಟ್ಟಿದೆ.

ನಿಖಿತಾ ಅವರು ಜೂ.13ರಂದು ರಾತ್ರಿ ವಿಪರೀತ ವಾಂತಿಯಿಂದ ಅಸ್ವಸ್ಥಗೊಂಡಿದ್ದರು. ಜೂ.14ರಂದು ಮುಂಜಾನೆ ಆಕೆಯನ್ನು ಮನೆಯವರು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿಖಿತ ಮೃತಪಟ್ಟಿದ್ದಳು. ಇದೀಗ ವೈದ್ಯರ ನಿರ್ಲಕ್ಷ್ಯದಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಮನೆಯವರು‌ ಆರೋಪಿಸಿದ್ದಾರೆ.