ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ನಿಧನ.

ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಶನಿವಾರ ರಾತ್ರಿ ಹೃದಯಾಘಾತದಿಂದ ಮಂಗಳೂರಿನ ಮನೆಯಲ್ಲಿ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕ ರಾಗಿ ಸೇವೆ ಸಲ್ಲಿಸಿದ್ದರು.

ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ಅವರು ನಿರ್ವಹಿಸಿದ್ದರು.

ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು.