ಉಡುಪಿ: ಟೈಗರ್ ಫ್ರೆಂಡ್ಸ್ ಉಡುಪಿ ಇದರ ವತಿಯಿಂದ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಾಲ್ಕನೇ ವರ್ಷದ ಆಹ್ವಾನಿತ ತಂಡಗಳ ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನ “ಅಬ್ಬರದ ಉಡುಪಿ ಪಿಲಿನಲಿಕೆ” ಇದೇ ಸೆ.14ರಂದು ಸಂಜೆ 4.30ಕ್ಕೆ ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿ ವೇದಿಕೆಯಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಶಶಿರಾಜ್ ಕುಂದರ್ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ 100,001 ರೂ. ನಗದು ಬಹುಮಾನ ಮತ್ತು ಶಾಶ್ವತ ಫಲಕ, ದ್ವೀತಿಯ ಸ್ಥಾನ ಪಡೆಯುವ ತಂಡಕ್ಕೆ 50,001 ರೂ. ನಗದು ಬಹುಮಾನ ಮತ್ತು ಶಾಶ್ವತ ಫಲಕ ನೀಡಲಾಗುವುದು. ಅಲ್ಲದೆ, ಭಾಗವಹಿಸುವ ಪ್ರತಿ ತಂಡಗಳಿಗೆ ಗೌರವಧನ ನೀಡಲಾಗುವುದು ಎಂದು ತಿಳಿಸಿದರು.
ಅಂದು ಬೆಳಿಗ್ಗೆ 9.30ಕ್ಕೆ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ. 1ರಿಂದ 3 ವರ್ಷದೊಳಗಿನ ಮಕ್ಕಳು ಹಾಗೂ 3ವರ್ಷದಿಂದ 6ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಕೆ.ಹರೀಶ್ ಪೂಜಾರಿ, ಹರೀಶ್ ಕುಮಾರ್, ಭೋಜ ಶೇರಿಗಾರ್ ಇದ್ದರು.












