ಉಡುಪಿ: ಗೋಕಳ್ಳತನ, ಅಕ್ರಮ ಗೋಸಾಗಟ ತಡೆಗೆ ಆಗ್ರಹಿಸಿ ವಿ.ಹಿಂ.ಪ-ಬಜರಂಗದಳ ಮನವಿ

ಉಡುಪಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ, ಅಕ್ರಮ ಗೋಸಾಗಾಟದ ವಿರುದ್ಧ ಹಾಗೂ ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್-ಬಜರಂಗದಳದ ವತಿಯದ ಉಡುಪಿ ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಮನವಿ ಮಾಡಲಾಯಿತು.
ಮನವಿಯಲ್ಲಿ ಜಿಲ್ಲಾಡಳಿತ ತಕ್ಷಣ ತೆಗೆದುಕೊಳ್ಳಬೇಕಾದ ಇಪ್ಪತ್ತು ಬೇಡಿಕೆಗಳನ್ನು  ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಲಾಯಿತು.
ಬಜರಂಗದಳ‌ ಹಾಗೂ‌ ವಿಶ್ವ ಹಿಂದೂ‌ ಪರಿಷತ್ ಮುಖಂಡರು ಉಪಸ್ಥಿತರಿದ್ದರು.