ಭಗವದ್ಗೀತೆ ಸಾರ್ವಕಾಲಿಕ ಶ್ರೇಷ್ಠ ಗ್ರಂಥ: ಪ್ರಭಂಜನಾಚಾರ್ಯ

ಉಡುಪಿ: ಭಗವದ್ಗೀತೆ ಸಾರ್ವಕಾಲಿಕ ಶ್ರೇಷ್ಠ ಗ್ರಂಥವಾಗಿದ್ದು, ಇದಕ್ಕೆ ವಿಶ್ವದಲ್ಲಿಯೇ ಅತ್ಯಂತ ಗೌರವವಿದೆ ಎಂದು ವಿದ್ವಾಂಸ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ ಹೇಳಿದರು.
ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಉಡುಪಿಯ ಗೀತಾಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಗೀತಾಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಶ್ರೀಕೃಷ್ಣನು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಭಗವದ್ಗೀತೆಯನ್ನು ಉಪದೇಶಿಸಿದನು.
ಶ್ರೀಕೃಷ್ಣನಿಗೆ ಭಗವದ್ಗೀತೆ ಪುಟ್ಟ ಗ್ರಂಥವಾಗಿದ್ದರೂ ಅರ್ಥದ ದೃಷ್ಟಿಯಿಂದ ಬೃಹತ್‌ ಗ್ರಂಥವಾಗಿದೆ. ಮಾನವನ ಎಲ್ಲ ಸಂಶಯಗಳಿಗೂ ಇದರಲ್ಲಿ ಉತ್ತರವಿದೆ. ಇದು ವಿಶ್ವಮಾನ್ಯವಾಗಿರುವ ಗ್ರಂಥ ಎಂದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳಲ್ಲಿ ನಡೆದ ಗೀತಾಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿದ್ವಾಂಸ ಬಿ. ಗೋಪಾಲಾಚಾರ್ಯರು ಸ್ವಾಗತಿಸಿ, ವಂದಿಸಿದರು.