ಉಡುಪಿ: ವೀಕೆಂಡ್ ಕರ್ಪ್ಯೂ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಡಿಸಿ ಕೂರ್ಮ ರಾವ್

ಉಡುಪಿ: ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸುವ ಬಗ್ಗೆ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಡುಪಿಯ ನೂತನ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಹೇಳಿದ್ದಾರೆ.

ಇಂದು ಉಡುಪಿ ಸರಕಾರಿ ಬಾಲಕಿಯರ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಬಳಿಕ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಜನರ, ಜನಪ್ರತಿನಿಧಿಗಳ ಭಾವನೆ ಅರಿತುಕೊಂಡು ಅದರಂತೆ ಕೆಲಸ ಮಾಡುತ್ತೇನೆ‌ ಎಂದರು.

ಇಂದಿನಿಂದ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭವಾಗಿದೆ. ಮಕ್ಕಳ ಜೊತೆ ಸಂವಾದ ನಡೆಸಿ ಅವರ ಅಭಿಪ್ರಾಯ ಕೇಳಿದ್ದೇನೆ. ಮುಂದಿನ‌ ದಿನಗಳಲ್ಲಿ ಪಾಸಿಟಿವಿಟಿ ದರ ಮತ್ತಿತರ ಅಂಶಗಳನ್ನು ನೋಡಿಕೊಂಡು ಸೂಕ್ತ ತೀರ್ಮಾನ‌ ಕೈಗೊಳ್ಳುತ್ತೇವೆ ಎಂದು ಹೇಳಿದರು.