ಉಡುಪಿ ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಮಣ ಸಂಭ್ರಮ

ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ‌ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸೋಮವಾರ ಮಕರ ಸಂಕ್ರಾಂತಿಯಂದು ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ವೈಭವದಿಂದ ಜರಗಿತು. ಪೇಜಾವರ ಹಿರಿಯ, ಕಿರಿಯ, ಕೃಷ್ಣಾಪುರ, ಅದಮಾರು ಹಿರಿಯ, ಕಿರಿಯ, ಕಾಣಿಯೂರು, ಸೋದೆ, ಭಂಡಾರಕೇರಿ, ಸುಬ್ರಹ್ಮಣ್ಯ, ಬನ್ನಂಜೆ ಮಠದ ಸ್ವಾಮೀಜಿಯವರು ಪಾಲ್ಗೊಂಡಿದ್ದರು.