ಶ್ರೀ ಕೃಷ್ಣ ಮಠ: ರಥಬೀದಿಯಲ್ಲಿ ಮೆರವಣಿಗೆ

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ವಿರಾಟಪರ್ವಪ್ರವಚನಮಂಗಲ ಮತ್ತು ಷಷ್ಠಿಪೂರ್ತಿ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ “ವಿಶ್ವಾರ್ಪಣಂ” ಅನ್ನು  ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಯೋಜಿಸಿದ್ದು,  ನಾಳೆ ನಡೆಯಲಿರುವ ದಶ ಕುಂಡಗಳಲ್ಲಿ 108 ಋತ್ವಿಜರಿಂದ ಧನ್ವಂತರಿ ಯಾಗ ಹಾಗೂ ಪುಣ್ಯ ಕ್ಷೇತ್ರ ಹಾಗೂ ಪುಣ್ಯ ನದಿಗಳ ಜಲದಿಂದ ಶ್ರೀಪಾದರಿಗೆ ಅಭಿಷೇಕ ನಡೆಯಲಿದೆ.ಇದರ ಪೂರ್ವಭಾವಿಯಾಗಿ ಎಲ್ಲ ಕ್ಷೇತ್ರಗಳ ಪುಣ್ಯ ಜಲವನ್ನು ಪಲ್ಲಕ್ಕಿಯಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ನಡೆಸಿ ಕೃಷ್ಣ ಮಠಕ್ಕೆ ತಂದು ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ದೇವತಾ ಪ್ರಾರ್ಥನೆ ನಡೆಸಿದರು.