ಮಂಗಳೂರು: ಉಡುಪಿ ಎಕ್ಸ್ಪ್ರೆಸ್ ‘ಸಹಕಾರ ಸೌರಭ ‘ ವಿಶೇಷ ಸಂಚಿಕೆ ಬಿಡುಗಡೆ

ಮಂಗಳೂರು: ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಉಡುಪಿ ಎಕ್ಸ್ಪ್ರೆಸ್ ವೆಬ್ ಸೈಟ್ ನ ‘ಸಹಕಾರ ಸೌರಭ’ ವಿಶೇಷ ಸಂಚಿಕೆಯನ್ನು ಗುರುವಾರದಂದು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ  ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಬ್ಯಾಂಕ್ ನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ, ಜೈರಾಜ್ ಬಿ ರೈ, ರವೀಂದ್ರ ಕಂಬಳಿ ಮತ್ತು ರತ್ನಾಕರ್ ಶೆಟ್ಟಿ ಉಪಸ್ಥಿತರಿದ್ದರು.