ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ: ಇಂದು ಬ್ರಹ್ಮಕುಂಭಾಭಿಷೇಕ

ಉಡುಪಿ: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನವೀಕೃತ ತಾಮ್ರ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗೂ ರಾಶಿ ಪೂಜಾ ಮಹೋತ್ಸವವು ಮೇ.24ರ ತನಕ ನಡೆಯಲಿದೆ.

ಇಂದು ಬ್ರಹ್ಮಕುಂಭಾಭಿಷೇಕ:

ಮೇ 21ರ ಬೆಳಿಗ್ಗೆ 9.15ಕ್ಕೆ ಶ್ರೀ ಸಿದ್ಧಿ ವಿನಾಯಕ ದೇವರಿಗೆ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮಗಳು:

ಮೇ 21ರಂದು ಸಂಜೆ 5.30ಕ್ಕೆ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಯು.ಎ. ಪ್ರಭಾಕರ್ ರಾವ್ ಅವರು ವಹಿಸುವರು.

ಮುಖ್ಯ ಅತಿಥಿಯಾಗಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಕಿರಿಯೂರು ಉದಯಕುಮಾರ್ ಶೆಟ್ಟಿ ಅವರು ಉಪಸ್ಥಿತರಿರುವರು. ಹಾಗೂ ಧಾರ್ಮಿಕ ಪ್ರವಚನವನ್ನು ಕೆ.ಕೃಷ್ಣರಾಜ ಭಟ್ ಕುತ್ಪಾಡಿ ಮಾಡಲಿರುವರು.