ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಜೊತೆ ಭಾಗಿಯಾದ ಕೇಂದ್ರ ಸಚಿವ-ಸಂಸದರು

ಉಡುಪಿ: ಇಲ್ಲಿನ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಪರವಾಗಿ ಉಡುಪಿ ಸಂತೆಕಟ್ಟೆಯಲ್ಲಿ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಬಿ ಎಲ್ ವರ್ಮಾ, ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ, ಕೆ ರಘುಪತಿ ಭಟ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಮತಯಾಚನೆ ಮಾಡಿದರು.