ಉನ್ನತ ಶಿಕ್ಷಣದಲ್ಲಿ ದೈಹಿಕ ಶಿಕ್ಷಣದ ಪಾತ್ರ-ವಿಶೇಷ ಕಾರ್ಯಕ್ರಮ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದಲ್ಲಿ ಇತ್ತೀಚೆಗೆ ಐಕ್ಯುಎಸಿ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ “ಉನ್ನತ ಶಿಕ್ಷಣದಲ್ಲಿ ದೈಹಿಕ ಶಿಕ್ಷಣದ ಪಾತ್ರ” ವಿಶೇಷ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದೈಹಿಕ ಶಿಕ್ಷಣ ಬೋಧಕ ರಾಮಚಂದ್ರ ಪಾಟ್ಕರ್ ಆಗಮಿಸಿ, ವಿದ್ಯಾರ್ಥಿಗಳಿಗೆ ರಚನಾತ್ಮಕ ವ್ಯಕ್ತಿತ್ವ ನಿರ್ಮಾಣದಲ್ಲಿ ದೈಹಿಕ ಮಾನಸಿಕ ಕ್ಷಮತೆಯ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರು ಮಂಜುನಾಥ್ ವಿ.ಎನ್. ಗಾಂವ್ಕರ್ ಹಾಗೂ ಕ್ರೀಡಾ ಕಾರ್ಯದರ್ಶಿಯರಾದ ಸಚಿನ್ ಹಾಗೂ ಪ್ರತಿಮಾ ಉಪಸ್ಥಿತರಿದ್ದರು. ಕ್ರೀಡಾ ವಿಭಾಗದ ಸಂಚಾಲಕಿ ಸವಿತಾ ಸ್ವಾಗತಿಸಿದರು. ದೀಪಾ ಕಾರ್ಯಕ್ರಮವನ್ನು ನಿರೂಪಿಸಿದರು.