ಉತ್ತರ ಪ್ರದೇಶ ಚುನಾವಣೆ: ಎರಡನೇ ಬಾರಿ ಅಭೂತಪೂರ್ವ ಜಯ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ

ಉಡುಪಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಎರಡನೇ ಬಾರಿ ಅಭೂತಪೂರ್ವ ಜಯಗಳಿಸಿರುವುದಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಸಂಘಟನೆಗೆ ದೊರೆತ ಗೆಲುವಾಗಿದ್ದು, ಪಂಚರಾಜ್ಯ ಚುನಾವಣೆಯಲ್ಲಿ ವಿರೋಧ ಪಕ್ಷ ಗಳ ಆರೋಪಗಳಿಗೆ ತಕ್ಕವಾದ ಉತ್ತರವನ್ನು ಮತದಾರರು ನೀಡಿದ್ದು, ಬಿಜೆಪಿ ಒಂದೇ ಈ ದೇಶಕ್ಕೆ ಆಶಾಕಿರಣವಾಗಿದೆ.

ಈ ಚುನಾವಣೆಯ ಫಲಿತಾಂಶವೇ ಸಾಕ್ಷಿಯೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.