ಉತ್ತರಾಖಂಡ್ ಹಿಮಪ್ರವಾಹ: ಪೇಜಾವರ ಶ್ರೀ ಕಳವಳ

ಉಡುಪಿ: ಉತ್ತರಾಖಂಡ್ ನಲ್ಲಿ ಭಾನುವಾರ ಭೀಕರ ಹಿಮಪ್ರವಾಹ ಸಂಭವಿಸಿದ್ದು, ಹಲವಾರು ಮಂದಿ ಕಣ್ಮರೆಯಾಗಿದ್ದಾರೆ. ಈ ಪ್ರಕೃತಿ ವಿಕೋಪಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಪ್ರಾಕೃತಿಕ ದುರ್ಘಟನೆಯಿಂದ ತೀವ್ರ ಬೇಸರವಾಗಿದೆ. ಇದರಿಂದ ಸಂತ್ರಸ್ತರಾಗಿರುವವರ ನೋವಿಗೆ ನಮ್ಮ ಸಹಾನುಭೂತಿ ಇದೆ. ಉತ್ತರಾಖಂಡ್ ರಾಜ್ಯದ ಸಮಸ್ತ ಜನತೆಯ ಶ್ರೇಯಸ್ಸಿಗಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.

ಘಟನೆಯಿಂದ ಮೃತರಾಗಿರುವವರಿಗೆ ದೇವರು ಸದ್ಗತಿಯನ್ನು ಕರುಣಿಸಲಿ . ನಾಪತ್ತೆಯಾಗಿರುವವರು ಶೀಘ್ರವಾಗಿ ಯಾವುದೇ ಅಪಾಯವಿಲ್ಲದೆ ಪತ್ತೆಯಾಗಲೆಂದು ಆಶಿಸುತ್ತೇವೆ ಎಂದು ಶ್ರೀಗಳು ತಿಳಿಸಿದ್ದಾರೆ.