ಉಡುಪಿ ನಗರದ ವಿವಿಧ ಭಾಗಗಳಲ್ಲಿ ವನಮಹೋತ್ಸವ

ಉಡುಪಿ: ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವನಮಹೋತ್ಸವದ ಅಂಗವಾಗಿ ವಿವಿಧ ಭಾಗದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಕರಂಬಳ್ಳಿ ವಾರ್ಡಿನ ವೆಂಕಟರಮಣ ದೇವಸ್ಥಾನದ ಬಳಿ, ಮೂಡು ಸಗ್ರಿ ವಾರ್ಡಿನ ಬಾಲಾಜಿ ಲೇ ಔಟ್ ಬಳಿ, ಒಳಕಾಡು ವಾರ್ಡಿನ ಪಾಂಡು ಶೇರಿಗಾರ್ ಮನೆ ಬಳಿ, ಕಡಿಯಾಳಿ ವಾರ್ಡಿನ ಕಾತ್ಯಾಯಿನಿ ನಗರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಡುಪಿ ನಗರ ಬಿಜೆಪಿ ವತಿಯಿಂದ ವಾರ್ಡ್ ಗಳಿಗೆ ತಲಾ 50 ಸಸಿಗಳನ್ನು ನೀಡಲಾಗಿದೆ.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಗಿರಿಧರ ಆಚಾರ್ಯ, ಗಿರೀಶ್ ಅಂಚನ್,  ರಜನಿ ಹೆಬ್ಬಾರ್, ಭಾರತಿ ಪ್ರಶಾಂತ್ ಗೀತಾ ಶೇಟ್, ಉಡುಪಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಿಶೋರ್ ಕರಂಬಳ್ಳಿ, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್, ಹಿಂದುಳಿದ ವರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್, ಇನ್ನಿತರ ಬಿಜೆಪಿ ನಾಯಕರು ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.