ವಾರಾಹಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​

ಉಡುಪಿ : ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ. ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್​ ನಾಯಕ ಪ್ರತಾಪ್​ ಚಂದ್ರ ಶೆಟ್ಟಿ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ. ಈ ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವ ಎಂದು ಹೇಳಿದರು.