ಕುಂದಾಪುರ: ಬಿಜೆಪಿ ಸೇವಾ ಪಾಕ್ಷಿಕದ ಅಂಗವಾಗಿ ಹಲವಾರು ಕಾರ್ಯಕ್ರಮ

ಕುಂದಾಪುರ: ಬಿಜೆಪಿ ಕುಂದಾಪುರ ಮಂಡಲದ ವತಿಯಿಂದ ಪ್ರಧಾನಿ ಮೋದಿ ಜನ್ಮದಿನದಿಂದ ಮಹಾತ್ಮಾ ಗಾಂಧಿಯವರ ಜನ್ಮದಿನದವರೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸೆ.17ರಂದು ರೆಡ್ ಕ್ರಾಸ್ ಸಹಕಾರದಲ್ಲಿ ರಕ್ತದಾನ ಶಿಬಿರ, ಸೆ.20ರಂದು ಮಹಿಳಾ ಮೋರ್ಚಾ ವತಿಯಿಂದ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮ, ಸೆ.22ರಂದು ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಚಿಕನ್ ಸಾಲ್ ಸ.ಪ್ರಾ.ಶಾಲಾ ವಠಾರದಲ್ಲಿ ಅರಳಿ ಗಿಡ ನೆಡುವ ಕಾರ್ಯಕ್ರಮ, ಸೆ.24ರಂದು ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆ ಸ್ವಚ್ಛತಾ ಕಾರ್ಯಕ್ರಮ, ಸೆ.25ರಂದು ಎಸ್.ಟಿ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕುಂದಾಪುರ ಬೀಚ್ ಸ್ವಚ್ಛತಾ ಕಾರ್ಯಕ್ರಮ, ಸೆ.30ರಂದು ಎಸ್.ಸಿ ಮೋರ್ಚಾ ವತಿಯಿಂದ ಆರೋಗ್ಯ ತಪಾಸಣೆ ಹಾಗೂ ಆಭಾ ಕಾರ್ಡ್ ನೋಂದಣಿ ಕಾರ್ಯಕ್ರಮ, ಅ.2ರಂದು ಕುಂದಾಪುರ ವಿಧಾನಸಭಾ ಕ್ಷೇತ್ರದ 222 ಬೂತ್ ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಶಿವಕುಮಾರ್, ಪ್ರತಾಪಚಂದ್ರ ಚೇರ್ಕಾಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಮಂಡಲದ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಮಾಧ್ಯಮ ಸಂಚಾಲಕ ಅಭಿಷೇಕ್, ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.