ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗಾಗಿ ವಿವಿಧ ಸೇವೆ ಲಭ್ಯ

ಉಡುಪಿ: ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿದ್ದು, ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.