ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನಿಂದ ಮೂರು ವರ್ಷ ಸರಕಾರ ಸುಭದ್ರವಾಗಿದೆ: ವೇದವ್ಯಾಸ್ ಕಾಮತ್

ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಬಿಜೆಪಿ ಗೆಲುವು ಪಡೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಶಾಸಕ ಡಿ. ವೇದವ್ಯಾಸ್ ಕಾಮತ್  ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಶುಭ ಕೋರಿದ್ದಾರೆ.

ನಮ್ಮ ಸಂಸದರೂ ಹಾಗೂ ರಾಜ್ಯಾದ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಪ್ರಬಲ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸಿದ್ದ ಬಿಜೆಪಿ ನಿರೀಕ್ಷೆಯಂತೆ ಗೆದ್ದಿದ್ದು, ರಾಜ್ಯದಲ್ಲಿ ಮುಂದಿನ ಮೂರು ವರ್ಷ ಸ್ಥಿರ ಸರ್ಕಾರ ಇರಲಿದೆ. ಜನರಿಗೆ ಬಿಜೆಪಿ ಪಕ್ಷದ ಮೇಲಿನ ವಿಶ್ವಾಸಕ್ಕೆ ಈ ಗೆಲುವು ಸಾಕ್ಷಿಯಾಗಿದೆ. ಮಧ್ಯಂತರ ಚುನಾವಣೆಯೇ ಬೇಡ ಅನ್ನೋ ನಿರ್ಧಾರಕ್ಕೆ ಮತದಾರರು ಜೈ ಅಂದಿದ್ದಾರೆ. ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದ್ದು, ಉತ್ತಮ ಆಡಳಿತವನ್ನು ನೀಡಲಿದೆ ಎಂದವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.