ಕಾಪು: ವಾಹನಗಳ ಬ್ಯಾಟರಿ ಕಳವು; ಐದು ಆರೋಪಿಗಳ ಬಂಧನ

ಕಾಪು: ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2.21 ಲಕ್ಷ ರೂ. ಮೌಲ್ಯದ 22  ಬ್ಯಾಟರಿ, ಮೂರು ಕಾರು ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಕಾಪು ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಶರೀಫ್ (35), ಕಳತ್ತೂರು ಚಂದ್ರನಗರ ಜನತಾ ಕಾಲನಿಯ ನಿವಾಸಿ ಅಲ್ತಾಫ್ (26), ಕುಂದಾಪುರ ತೆಕ್ಕಟ್ಟೆಯ ಕಣ್ಣುಕೆರೆ ಗ್ರಾಮದ ಪ್ರಸ್ತುತ ಮೂಳೂರಿನ ಎಸ್‍ಎಸ್ ರೋಡ್ ನಿವಾಸಿ ಫರ್ಜೀನ್ ಅಹಮದ್ (21), ಮೂಳೂರಿನ ಫಿಶರೀಸ್ ರಸ್ತೆಯ ನಿವಾಸಿ ಅಫ್ಝಲ್ ರಹ್ಮಾನ್ (20), ಮೂಳೂರಿನ ಫಿಶರೀಸ್ ರಸ್ತೆಯ ಮುಹಮ್ಮದ್ ಇಜಾಝ್ (18) ಎಂದು ಗುರುತಿಸಲಾಗಿದೆ.

ವಾಹನಗಳ ಬ್ಯಾಟರಿ ಕಳವು ಮಾಡುತಿದ್ದ ಬಗ್ಗೆ ಪಡುಬಿದ್ರಿ, ಶಿರ್ವ ಹಾಗೂ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪ್ರಕರಣದ ತನಿಖೆ ನಡೆಸಿದ ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್‍ಪಿ ಎನ್. ವಿಷ್ಣುವರ್ಧನ್, ಎಎಸ್‍ಪಿ ಕುಮಾರಚಂದ್ರ ನಿರ್ದೆಶನದಂತೆ, ಕಾರ್ಕಳ ಡಿವೈಎಸ್‍ಪಿ ವಿಜಯ ಪ್ರಸಾದ್ ಮಾರ್ಗದರ್ಶನದಲ್ಲಿ ಕಾಪು ಇನ್ಸ್‍ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪಿಎಸ್‍ಐ ತಿಮ್ಮೇಶ್, ರಾಘವೇಂದ್ರ, ತಂಡದ ಪ್ರವೀಣ್ ಕುಮಾರ್, ನಾರಾಯಣ, ರಾಜೇಶ್, ಹೇಮರಾಜ್, ಸಂದೇಶ, ಆನಂದ ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು.