ಕಾಪು: ಬಿಜೆಪಿ ಯುವಮೋರ್ಚಾ ವತಿಯಿಂದ ಮರಳು ಶಿಲ್ಪ ರಚಿಸಿ ವಿಜಯ ಸಂಕಲ್ಪ ಅಭಿಯಾನ

ಕಾಪು: ಬಿಜೆಪಿ ಯುವಮೋರ್ಚಾ ವತಿಯಿಂದ ಸೋಮವಾರ ಕಾಪು ಬೀಚ್ ದೀಪಸ್ಥಂಭದ ಬಳಿ ಮರಳು ಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಭಾಗವಹಿಸಿ ಶುಭಹಾರೈಸಿದರು.

ಕಾಪು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ನೇತೃತ್ತ್ವದಲ್ಲಿ ಈ ಕಾರ್ಯಕ್ರಮ‌ ನಡೆದಿದ್ದು, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಪ್ರಧಾನ‌ ಕಾರ್ಯದರ್ಶಿ ಅನಿಲ್ ಶೆಟ್ಟಿ, ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಶ್ರೀಶ ನಾಯಕ್, ಪಕ್ಷದ ಪ್ರಮುಖರಾದ ಗಂಗಾಧರ್ ಸುವರ್ಣ, ನವೀನ್ ಎಸ್ ಕೆ, ಅರುಣ್ ಶೆಟ್ಟಿ, ಸಂದೀಪ್ ಶೆಟ್ಟಿ, ಅನಿಕ್ ಕುಮಾರ್, ಶಶಿಪ್ರಭಾ ಶೆಟ್ಟಿ, ಕೇಸರಿ ಯುವರಾಜ್, ನಿತಿನ್, ರಾಜೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು. ಯುವಮೋರ್ಚಾ ಪದಾಧಿಕಾರಿಗಳಾದ ಸೋನು ಪಾಂಗಳ, ಪ್ರವೀಣ್ ಪೂಜಾರಿ, ಸತೀಶ್ ಪೂಜಾರಿ, ಅಭಿರಾಜ್ ಸುವರ್ಣ, ಅಭಿಜಿತ್, ಧೀರೇಶ್ ಡಿ.ಪಿ, ರಾಜ್ ಪಡುಬಿದ್ರೆ, ಅರುಣ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಗಮಿಸಿ ಶುಭ ಕೋರಿದರು.