ವಿಪ್ ಉಲ್ಲಂಘನೆ: ಕಾಪು ಪುರಸಭೆಯ ಕಾಂಗ್ರೆಸ್ ಸದಸ್ಯ ಅಮಾನತು

ಉಡುಪಿ: ಬುಧವಾರ ನಡೆದ ಕಾಪು ಪುರಸಭಾ ಅಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಪುರಸಭಾ ಸದಸ್ಯ ಸುರೇಶ್ ದೇವಾಡಿಗ ಅವರನ್ನು ಕಾಂಗ್ರೆಸ್ ಉಚ್ಚಾಟಿಸಿದೆ.

ಸುರೇಶ್ ದೇವಾಡಿಗ ಚುನಾವಣಾ ಪ್ರಕ್ರಿಯೆಗೆ ಆಗಮಿಸದೆ ವಿಪ್ ಉಲ್ಲಂಘನೆ ಮಾಡಿದ್ದರು. ಹಾಗಾಗಿ ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.