ವಿಟ್ಲ: ಕೊಡಂಗಾಯಿ ಬಳಿಯ ಮೂರ್ಕಜೆ ಎಂಬಲ್ಲಿರುವ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಸೋಮವಾರ ನಡೆದಿದೆ.
10ನೇ ತರಗತಿಯ ವಿದ್ಯಾರ್ಥಿನಿ ಬೆಂಗಳೂರು ಮೂಲದ ವೈಗ ಲಕ್ಷ್ಮೀ ಮೃತಪಟ್ಟರು.
ವೈಗ ಲಕ್ಷ್ಮೀ ರವಿವಾರ(ಫೆ.22)ದಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಇಂದು ಗುರುಕುಲದ ಕೆರೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮೃತದೇಹವನ್ನು ಮೇಲಕ್ಕೆತ್ತಿ, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
















