ವಿಧಾನಸಭೆಯಲ್ಲಿ ಸಹಕಾರಿ ಕ್ಷೇತ್ರದ ಧ್ವನಿಯಾಗುವೆ: ಯಶ್ ಪಾಲ್ ಸುವರ್ಣ

ಉಡುಪಿ: ಸ್ವತಃ ಸಹಕಾರಿ ರಂಗದಲ್ಲಿ ಸಾಕಷ್ಟು ಅನುಭವ ಹೊಂದಿರುವ ತಾನು, ವಿಧಾನಸಭೆಯಲ್ಲಿ ಸಹಕಾರಿ ಕ್ಷೇತ್ರದ ಧ್ವನಿಯಾಗುವೆ ಎಂದು ಶಾಸಕ ಯಶಪಾಲ್ ಸುವರ್ಣ ಭರವಸೆ ನೀಡಿದರು.

ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಡಯಾನ ಹೋಟೆಲ್ ಹಾಲ್ ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಹಕಾರಿಗಳನ್ನು ಪರಿಗಣಿಸಬೇಕು ಎಂದು ಹಿಂದಿನಿಂದಲೂ ಪ್ರತಿಪಾದಿಸಿದ್ದ ನನಗೆ ಶಾಸಕನಾಗುವ ಅವಕಾಶ ಲಭಿಸಿದೆ. ಉಡುಪಿಯಲ್ಲಿ ಸಹಕಾರ ಸೌಧ ನಿರ್ಮಾಣ ಹಾಗೂ ಸಹಕಾರಿ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಗಮನಹರಿಸುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಹಾಗೂ ಮೂಡಬಿದ್ರೆ ‌ಸಹಕಾರಿ ತರಬೇತಿ ಕೇಂದ್ರದ ನೂತನ ಪ್ರಾಂಶುಪಾಲ ಡಾ್. ವಿಶ್ವೇಶ್ವರಯ್ಯ ಅವರನ್ನು ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಅಭಿನಂದಿಸಲಾಯಿತು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.

ದ.ಕ. ಕೇಂದ್ರ ಸಹಕಾರ ಸಂಘ ನಿರ್ದೇಶಕ ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳಪು, ಯೂನಿಯನ್ ಉಪಾಧ್ಯಕ್ಷ ಅಶೋಕ್ ಬಲ್ಲಾಳ್, ಜಿಲ್ಲಾ ಸಹಕಾರಿ ಉಪನಿರ್ದೇಶಕ ರಮೇಶ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯೂನಿಯನ್ ನಿರ್ದೇಶಕ ಶ್ರೀಧರ ಪಿ. ಎಸ್. ಸ್ವಾಗತಿಸಿ, ನಿರೂಪಿಸಿದರು. ಸಿಇಓ ಹರೀಶ್ ಬಿ.ಪಿ. ವಂದಿಸಿದರು.