ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಯಾವುದೇ ತನಿಖೆಗೆ ಸಂಪೂರ್ಣ ಬೆಂಬಲ: ವಿ ಸುನಿಲ್ ಕುಮಾರ್

ಕಾರ್ಕಳ: ಇಲ್ಲಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿದ್ದರೆ ಜಿಲ್ಲಾಡಳಿತ ಯಾವುದೇ ರೀತಿಯ ತನಿಖೆ ಮಾಡಲಿ ನಾನು ಬೆಂಬಲ ನೀಡುತ್ತೇನೆ ಎಂದು ಶಾಸಕ ವಿ ಸುನಿಲ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸಕ್ಕಾಗಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಪರಶುರಾಮ ಥೀಮ್ ಪಾರ್ಕಿಗೂ ಭೇಟಿ ನೀಡಬೇಕು, ಕಾರ್ಕಳ ಪ್ರವಾಸಿ ತಾಣವಾಗಿ ಬೆಳೆಯಬೇಕು ಇದರಿಂದ ಆರ್ಥಿಕತೆ ಬೆಳೆಯಬೇಕು ಎನ್ನುವ ಕಾರಣಕ್ಕಾಗಿ ಥೀಮ್ ಪಾರ್ಕನ್ನು ಮಾಡಲಾಗಿದೆ. ಅಭಿವೃದ್ದಿಯನ್ನು ಸಹಿಸದ ಜನರು ವೃಥಾ ಆರೋಪ ಮಾಡುತ್ತಿದ್ದಾರೆ ಎಂದ ಅವರು ತನಿಖೆಗೆ ಬೆಂಬಲ ಸೂಚಿಸಿದರು.