ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರ

ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ‘ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ’ ಕುರಿತು ಮಾಹಿತಿ ಕಾರ್ಯಗಾರವನ್ನು ಸೋಮವಾರದಂದು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ ಎ ಬಾಳಿಗಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಕಾರ್ಯದರ್ಶಿ ಮತ್ತು ಹೈಟೆಕ್ ಆಸ್ಪತ್ರೆಯ ಮೂಳೆ ತಜ್ಞ ಡಾ ಕೇಶವ ನಾಯಕ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಲತಾ ನಾಯಕ್ ಎಸ್, ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಮನು ಆನಂದ್ ಆಗಮಿಸಿದ್ದರು.

ಡಾ ದೀಪಕ್ ಮಲ್ಯ ಖಜಾಂಚಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಮನೋವೈದ್ಯರು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಡಾ ವಿರುಪಾಕ್ಷ ದೇವರಮನೆ ಮನೋವೈದ್ಯರು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಡಾ. ಮಾನಸ ಇ ಆರ್ ಮನೋವೈದ್ಯರು , ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಕರಾವಳಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ, ಬಾಳಿಗಾ ಆಸ್ಪತ್ರೆಯ ನಿರ್ದೇಶಕ, ಖ್ಯಾತ ಮನೋವೈದ್ಯ ಡಾ. ಪಿ ವಿ ಭಂಡಾರಿ ವಹಿಸಿದ್ದರು.

ಉದ್ಘಾಟನಾ ಸಮಾರಂಭದ ನಂತರ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಸಂವಹನದ ಪ್ರಾಮುಖ್ಯತೆಯ ಬಗ್ಗೆ ಕುರಿತು ಕಿರು ಪ್ರಹಸನ ನೀಡಿದರು. ತದನಂತರ ಮಾಹಿತಿ ಕಾರ್ಯಗಾರ ನಡೆಯಿತು. ಸಂವಹನ ಕೌಶಲ್ಯ ಎಂಬ ವಿಷಯದ ಕುರಿತು ಡಾ ಪಿ ವಿ ಭಂಡಾರಿ ಮಾಹಿತಿ ನೀಡಿದರು. ಡಾ.ಮನು ಆನಂದ್, ಮಾನಸಿಕ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು. ಡಾ ಮಾನಸ ಇ ಆರ್ ಒತ್ತಡ ನಿರ್ವಹಣೆ ಕುರಿತಾಗಿ ಮಾಹಿತಿ ನೀಡಿದರು.

ಆಪ್ತಸಮಾಲೋಚಕಿ ಶ್ರೀಮತಿ ಪದ್ಮ ರಾಘವೇಂದ್ರ ಪ್ರಾರ್ಥಿಸಿದರು. ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಮನೋವೈದ್ಯೆ ಡಾ ಮಾನಸ ಇ ಆರ್ ವಂದಿಸಿದರು. ಆಪ್ತಸಮಲೋಚಕಿ ಶ್ರೀಮತಿ ಅಕ್ಷಯ ಮತ್ತು ಶ್ರೀಮತಿ ಪೂರ್ಣಿಮಾ ನಿರೂಪಿಸಿದರು.