ಸುಳ್ಯ: ವಸತಿಗೃಹವೊಂದರಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ನಗರದ ಸರ್ದನ್ ವಸತಿಗೃಹದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್(19) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ(19) ಎಂದು ಗುರುತಿಸಲಾಗಿದೆ.
ಅ. 18 ರಂದು ರಾತ್ರಿ ಸುಳ್ಯದ ಸರ್ದನ್ ವಸತಿಗೃಹದಲ್ಲಿ ಇಬ್ಬರು ರೂಮ್ ಪಡೆದುಕೊಂಡಿದ್ದರು. ಆದರೆ ಮರುದಿನ ಅಂದರೆ ಅ. 19 ರಂದು ಮಧ್ಯಾಹ್ನ ಆದರೂ ಇಬ್ಬರು ರೂಮ್ ನಿಂದ ಹೊರಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ವಸತಿಗೃಹದ ಮೆನೆಜರ್ ರೂಮ್ ಬಳಿ ಹೋಗಿ ಕಿಟಕಿ ಬಳಿ ಬಂದು ಇಣುಕಿ ನೋಡಿದಾಗ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.












