ಉಡುಪಿ:ಜಿಲ್ಲಾ ಮಕ್ಕಳ ರಕ್ಷಣಾ ಘಟಕದ
ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ 8, 9 ಹಾಗೂ 10 ನೇ ತರಗತಿಯಲ್ಲಿ ವ್ಯಾಸಾಂಗ
ಮಾಡುತ್ತಿರುವ ಮಕ್ಕಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಮತ್ತು ಸಂಗೀತ ಹಾಗೂ ಕ್ರಾಫ್ಟ್ ಕಲಿಸುವ ಅರೆಕಾಲಿಕ ಶಿಕ್ಷಕರನ್ನು ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574964 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












