ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 6 ರಂದು ಮಧ್ಯಾಹ್ನ 3.30 ಕ್ಕೆ ತ್ರೈಮಾಸಿಕ ಅಂಚೆ ಅದಾಲತ್ ಅನ್ನು ನಿಗಧಿಪಡಿಸಲಾಗಿದೆ.
ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿಸೆಂಬರ್ 3 ರ ಮೊದಲು ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದು ಮತ್ತು ಅದಾಲತ್ ನಡೆಯುವ ದಿನದಂದು ಹಾಜರಿದ್ದು, ಸಮಕ್ಷಮ ಚರ್ಚಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.