ಉಡುಪಿ: ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಮಕ್ಕಳು ಕೆರೆ, ನದಿ, ಹಾಗೂ ಕಿಂಡಿ ಅಣೆಕಟ್ಟಿನ ಹಿನ್ನೀರು
ಮುಂತಾದ ಪ್ರದೇಶಗಳಲ್ಲಿ ಆಟ ಆಡಲು ಅಥವಾ ಈಜಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಬಿಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿರುವ ಹಿನ್ನೆಲೆ, ಮಕ್ಕಳ ಪೋಷಕರು ಇಂತಹ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಂಡು ಮಕ್ಕಳ ಚಲನವಲನಗಳನ್ನು ಗಮನಿಸಿ, ಸೂಕ್ತ ಎಚ್ಚರಿಕೆ ವಹಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.